ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಭಾರತ ಭಾಗ್ಯ ವಿಧಾತ” ಧ್ವನಿ-ಬೆಳಕು ದೃಶ್ಯ ವೈಭವಗಳ ಸಂಗೀತ ರೂಪಕ ಪ್ರದರ್ಶನಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.
ಸಚಿವರಾದ ಎಚ್ ಆಂಜನೇಯ, ಬಿಬಿಎಂಪಿ ಮಹಾಪೌರರಾದ ಜಿ ಪದ್ಮಾವತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್ ಅವರು ಮತ್ತು ಗಣ್ಯರು ಮುಖ್ಯಮಂತ್ರಿಗಳ ಜೊತೆ ಉಪಸ್ಥಿತರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಡಾ ಬಿ ಆರ್ ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆಯ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆದ ರಂಗ ಪ್ರದರ್ಶನಗಳ ಸಮಾರೋಪ ಕಾರ್ಯಕ್ರಮ ಮತ್ತು ಪ್ರದರ್ಶನವನ್ನು ಬೆಂಗಳೂರಿನಲ್ಲಿ ಏರ್ಪಡಿಸಿತ್ತು.
Leave a comment